ಈ ವರ್ಷ ಹಾಸನಾಂಬೆಗೆ ಕೊನೆಯ ವರ್ಷವಾಗಿದ್ದು, ಮುಂದಿನ ವರ್ಷದಿಂದ ಅಮ್ಮನವರ ಸಾನಿಧ್ಯ ಇಲ್ಲಿ ಇರಲ್ಲ ಎಂದು ಬ್ರಹ್ಮಾಂಡ ಗುರೂಜಿ ಅವರು ಹಾಸನಾಂಬೆ ದೇಗುಲದ ಕುರಿತು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಹಾಸನಾಂಬೆ ದರ್ಶನಕ್ಕೆ ಮುಂದಿನ ದಿನಗಳಲ್ಲಿ ಅವಕಾಶಗಳು ಅಡಚಣೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ ಬ್ರಹ್ಮಾಂಡ ಗುರೂಜಿ , 2025 ರಿಂದ 2032ರ ಅವಧಿಯಲ್ಲಿ ಸಿದ್ದೇಶ್ವರನ ಕೃಪೆಯಿಂದ ‘‘ಘಟಪ್ರಭ ಪರಿವರ್ತನೆ’’ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ.
ವಿಶೇಷವಾಗಿ 2025 ರಿಂದ 2032 ರ ಅವಧಿಯಲ್ಲಿ ಸಿದ್ದೇಶ್ವರನ ಕೃಪಾಶೀರ್ವಾದದಿಂದ ಮಹತ್ವದ ಬದಲಾವಣೆಗಳು ನಡೆಯಲಿವೆ. ರೇವಣ ಸಿದ್ದೇಶ್ವರ, ಹಾಸನದ ಸಿದ್ದೇಶ್ವರ, ಜೇನುಕಲ್ ಸಿದ್ದೇಶ್ವರ ಸೇರಿದಂತೆ ವಿವಿಧ ಸಿದ್ದೇಶ್ವರರ ಶಿವನ ಶಕ್ತಿ ಒಂದು ಕಡೆ ಸೇರಲಿದೆ. ಸಿದ್ದೇಶ್ವರ ಸಾನಿಧ್ಯ ತೆಗೆದಾಗ, ಇಲ್ಲಿ ಸೇರಿರುವ ಏಳು ಜನ ಅಕ್ಕ-ತಂಗಿಯರು ಸೇರಿ ‘‘ಘಟಪ್ರಭ ಪರಿವರ್ತನೆ’’ ಎಂಬ ದೊಡ್ಡ ಬದಲಾವಣೆ ಆಗಲಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.
ಈ ವರ್ಷ ಹಾಸನಾಂಬೆಗೆ ಕೊನೆಯ ವರ್ಷವಾಗಿದ್ದು, ಮುಂದಿನ ವರ್ಷದಿಂದ ಅಮ್ಮನವರ ಸಾನಿಧ್ಯ ಇಲ್ಲಿ ಇರಲ್ಲ ಎಂದು ಬ್ರಹ್ಮಾಂಡ ಗುರೂಜಿ ಅವರು ಹಾಸನಾಂಬೆ ದೇಗುಲದ ಕುರಿತು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಈ ಜಗತ್ಪ್ರಸಿದ್ದ ಹಾಸನಾಂಬೆಯ ವೈಶಿಷ್ಟ್ಯತೆಯನ್ನು ಈ ಕೊನೆಯ ಅವಧಿಯಲ್ಲಿ ನಾವು ದರ್ಶನ ಮಾಡಿದೆವಲ್ಲ ಎಂದು ಸಂತೋಷ ಪಡುತ್ತೇವೆ. ಮುಂದಿನ ಅವಕಾಶಗಳು ನಮಗಲ್ಲ. ಯಾವ ಜನರಿಗೂ ಹಾಸನಾಂಬೆ ದರ್ಶನ ಆಗುವ ಅವಕಾಶಗಳು ಕಡಿಮೆ, ಅಡಚಣೆಗಳು ಎಷ್ಟು ಬರುತ್ತವೆ ಎಂಬುದನ್ನು ನೀವೇ ಮುಂದೆ ನೋಡುತ್ತೀರಿ’ ಎಂದು ಗುರೂಜಿ ಹೇಳಿದ್ದಾರೆ. ಎಲ್ಲರಿಗೂ ಹಾಸನಾಂಬೆ ಆಯುರಾರೋಗ್ಯ, ಐಶ್ವರ್ಯವನ್ನು ನೀಡಿ ಕಾಪಾಡಲಿ ಎಂದು ಗುರೂಜಿ ಹಾರೈಸಿದ್ದಾರೆ.



