ರಿಷಬ್ ಶೆಟ್ಟಿ ನಿರ್ದೇಶನದ ʻ ಕಾಂತಾರ ಸಿನಿಮಾʼ ವಿರುದ್ಧ ನಟ ಚೇತನ್ ವಿವಾದಾತ್ಮಕ ಪೋಸ್ಟ್ ಮಾಡಿದ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಸಲಾಗಿದೆ.
ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ವಿವಾದಾತ್ಮಕ ಪೋಸ್ಟ್ ನಟ ಚೇತನ್ ವಿವಾದ ಹುಟ್ಟುಹಾಕಿದ್ದಾರೆ
ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ. ಎಲ್ಲೆಡೆ ಕಿಡಿಕಾರಿದ್ದಾರೆ. ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಚೇತನ್ ಹೇಳಿಕೆಗೆ ಚಕ್ರವರ್ತಿ ಸೂಲಿಬೆಲೆ ಹೀಗೆ ಹೇಳಿದ್ದಾರೆ. ಚೇತನ್ ಒಬ್ಬ ನಟನೂ ಅಗಿಲಿಲ್ಲ. ಎಡಪಂಥೀಯ ವ್ಯಕ್ತಿಯೂ ಆಗಿಲ್ಲ. ಕಾಂತಾರ ಚಿತ್ರದಂತೆ ತನ್ನ ಸಿನಿಮಾ ಹಿಟ್ ಆಗಲ್ಲ ಅಂತ ಹೊಟ್ಟೆಕಿಚ್ಚು ಆಕಾಶಕ್ಕೆ ಮುಖ ಮಾಡಿ ಉಗುಳುವ ಕೆಲಸ ಮಾಡಿದ್ದಾರೆ. ಬುಡಕಟ್ಟು ಜನಾಂಗವನ್ನು ಹಿಂದೂ ಧರ್ಮದಿಂದ ಬೇರೆ ಮಾಡೋ ಹುನ್ನಾರ ನಡೆಯುತ್ತಿದೆ. ಎಂದು ಹುಬ್ಬಳ್ಳಿಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.